ಸ್ಫೂರ್ತಿವಾಣಿಗಳು ಸದಾ ಕಣ್ಣಿಗೆ ಬೀಳುವಂತಿದ್ದರೆ ಅವುಗಳೇ ಸಾಧನೆಗೆ " ಸ್ಫೂರ್ತಿ-ಚ್ಯತನ್ಯದ ಚಿಲುಮೆಗಳು"

Powered By Blogger

19 ಸೆಪ್ಟೆಂಬರ್ 2011

ಡಿ.ವಿ. ಜಿ. ರವರ ಕಗ್ಗಗಳು

ಎಷ್ಟು ಚಿಂತಿಸಿದೊಡಂ ಶಂಕೆಯನೆ ಬೆಳೆಸುವೀ |
ಸೃಷ್ಟಿಯಲಿ ತತ್ವವೆಲ್ಲಿಯೊ ಬೆದಕಿ ನರನು ||
ಕಷ್ಟಪಡುತಿರಲೆನುವುದೇ ಬ್ರಹ್ಮವಿಧಿಯೇನೋ! |
ಅಷ್ಟೆ ನಮ್ಮಯ ಪಾಡು? - ಮಂಕುತಿಮ್ಮ ||


ಈ ಸೃಷ್ಟಿಯ ಬಗ್ಗೆ ನಾವೆಷ್ಟು ಯೋಚಿಸಿದರು ಸಹ, ನಮ್ಮಲ್ಲಿ ಒಂದು ವಿಧವಾದ, ಸಂದೇಹ ಮತ್ತು ಅಳುಕು ಬೆಳೆಯುತ್ತ ಹೋಗುತ್ತದೆ.
ಇದರಲ್ಲಿ ಏನಾದರು ಸಿದ್ಧಾಂತವಿದೆಯೆಂದು ಹುಡುಕುತ್ತ ಹೋದರೆ, ಈ ಬ್ರಹ್ಮ ವಿಧಿಯ ಪ್ರಕಾರ ನಾವು ಕಷ್ಟಪಡುತ್ತಲೇ ಇರಬೇಕು. ಇಷ್ಟೇ ನಮ್ಮ ಅವಸ್ಥೆಯೆಂದೆನಿಸುತ್ತದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ